ಧಾರವಾಡ 26 :
ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಾತ್ವಿಕ ಮನರಂಜನೆ ನೀಡಿ, ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು.
ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಅದೇನೋ ಕಾರಣಕ್ಕೆ ಅವರು ಅಜ್ಞಾತರಾಗಿಯೇ ಉಳಿದರು. ಮುಖ್ಯವಾಹಿನಿಗೆ ಬರಲಿಲ್ಲ. ಅವರಿಗೆ ದಕ್ಕಬೇಕಾದ ಗೌರವವೂ ದೊರೆಯಲಿಲ್ಲ.
ಅಂಥ ಅಪರೂಪದ ಪತ್ರಕರ್ತ, ನಾಟಕಕಾರ, ನಟ, ನಿರ್ದೇಶಕರನ್ನು ನೆನಪಿಸಿಕೊಳ್ಳುವ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಧಾರವಾಡದ ‘ಗೋವಾ ರಂಗ-ಸಂಗ’ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಕೊಡುಗೆ ನೀಡಿರುವ ಪ್ರತಿವರ್ಷ ತೊಡಗಿಸಿಕೊಂಡಿರುವ, ರಂಗಭೂಮಿಯಲ್ಲಿ ಪ್ರತಿಭಾವಂತರೊಬ್ಬರಿಗೆ ‘ಗೋವಾ’ ಹೆಸರಿನಲ್ಲಿ “ರಂಗಭೂಪತಿ” ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ರಾಜಕುಮಾರ ಮಡಿವಾಳರ ತಿಳಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದ್ದು
ವಿಶ್ವರಂಗ ಭೂಮಿ ದಿನದ ಪ್ರಯುಕ್ತ, ಇದೇ 30 ರಂದು ಸಂಜೆ 6.30 ಕ್ಕೆ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ, ರಚಿಸಿದ ರಂಗಗೀತೆಗಳ ಹಬ್ಬ ಗೋಪಾಲ ವಾಜಪೇಯಿ ಅವರು ಆಯೋಜಿಸಲಾಗಿದೆ. ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಮ್, ರವಿ ಯಲ್ಲಪ್ಪನವರ್, ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಹಿರಿಯ ಸಾಹಿತಿ, ನಾಟಕಕಾರ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶ್ರೀ
ಗೋಪಾಲ ವಾಜಪೇಯಿ ಕುಟುಂಬಸ್ತರು, ರಂಗಕರ್ಮಿ ಧನಂಜಯ ಕುಲಕರ್ಣಿ, “ಅವಧಿ ಈ- ಮ್ಯಾಗಜಿನ್” ಸಂಪಾದಕ ಶ್ರೀ ಜಿ.ಎನ್. ಮೋಹನ, ರವಿ ಕುಲಕರ್ಣಿ ಉಪಸ್ಥಿತರಿರುತ್ತಾರೆ ಎಂದು ‘ಗೋವಾ ರಂಗ ಸಂಗ’ ರಾಜಕುಮಾರ ಮಡಿವಾಳರ ತಿಳಿಸಿದರು
ಪತ್ರಿಕಾಗೋಷ್ಟಿಯಲ್ಲಿ ರವಿ ಕುಲಕರ್ಣಿ, ಮಹಾದೇವ ಹಡಪದ, ನಾಗರಾಜ ಪಾಟೀಲ ಇದ್ದರು.